alex Certify BIG BREAKING: ನೂತನ ಸಂಪುಟದಲ್ಲಿ ಯಾರಿಗೆ ಗೇಟ್ ಪಾಸ್…? ಯಾರಿಗೆಲ್ಲ ಸ್ಥಾನ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೂತನ ಸಂಪುಟದಲ್ಲಿ ಯಾರಿಗೆ ಗೇಟ್ ಪಾಸ್…? ಯಾರಿಗೆಲ್ಲ ಸ್ಥಾನ…?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಿಎಂ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.

10-12 ಹಾಲಿ ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದ್ದು, ಕೆಲ ಮಾಜಿ ಸಚಿವರಿಗೂ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸಚಿವರಾದ ಪ್ರಭು ಚೌವ್ಹಾಣ್, ಸಿ.ಸಿ.ಪಾಟೀಲ್, ಶ್ರೀಮಂತ್ ಪಾಟೀಲ್, ಶಶಿಕಲಾ ಜೊಲ್ಲೆ, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಸುರೇಶ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಕೆ.ಸಿ.ನಾರಾಯಣಗೌಡ ಮೊದಲಾದವರಿಗೆ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಇನ್ನು ಸುನೀಲ್ ಕುಮಾರ್, ಎಸ್.ಎ.ರಾಮದಾಸ್, ರಾಜುಗೌಡ, ಪಿ.ರಾಜೀವ್, ಎಂ.ಪಿ.ರೇಣುಕಾಚಾರ್ಯ, ಹಾಲಪ್ಪ ಆಚಾರ್, ಎಂ.ಪಿ.ಕುಮಾರಸ್ವಾಮಿ, ಪ್ರೀತಂ ಗೌಡ, ರೂಪಾಲಿ ನಾಯ್ಕ್ ಮೊದಲಾದವರಿಗೆ ನೂತನ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...