alex Certify BIG BREAKING: ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ; ಮಹಾರಾಷ್ಟ್ರದಲ್ಲಿ ಸಿಡಿದೆದ್ದ ಶಿವ ಸೈನಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ; ಮಹಾರಾಷ್ಟ್ರದಲ್ಲಿ ಸಿಡಿದೆದ್ದ ಶಿವ ಸೈನಿಕರು

ಮುಂಬೈ: ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಬಿಕ್ಕಟ್ಟು ಮುಂದುವರೆದಿದ್ದು, ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಭೀತಿಯಲ್ಲಿದೆ. ಈ ನಡುವೆ ಶಿವಸೇನೆ ಕಾರ್ಯಕರ್ತರು ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶಿವಸೇನೆಯ ನಾಯಕ, ಸಚಿವ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, 40ಕ್ಕೂ ಹೆಚ್ಚು ಶಾಸಕರನ್ನು ಗುವಾಹಟಿ ರೆಸಾರ್ಟ್ ಗೆ ಕರೆದೊಯ್ದಿದ್ದಾರೆ. ಶಿಂಧೆ ಹಾಗೂ ಟೀಂ ನ ಮನವೊಲಿಕೆ ಯತ್ನ ವಿಫಲವಾಗಿದೆ. ಈ ಮಧ್ಯೆ ಬಂಡಾಯ ಶಾಸಕರ ವಿರುದ್ಧ ಸಿಡಿದೆದ್ದಿರುವ ಶಿವಸೈನಿಕರು ಶಾಸಕರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಶಾಸಕರಾದ ಸಾವಂತ್, ಲಾಂಡೆ ಅವರ ಮುಂಬೈ ಹಾಗೂ ಪುಣೆಯಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಿ ದಾಂಧಲೆ ನಡೆಸಿರುವ ಶಿವಸೈನಿಕರು ಕಲ್ಲು ತೂರಾಟ ನಡೆಸಿ, ಕಚೇರಿಯ ಕಿಟಕಿ ಗಾಜುಗಳನ್ನು ಪುಡಿಗೈದಿದ್ದಾರೆ. ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...