alex Certify Big Breaking: ಮಹಾರಾಷ್ಟ್ರ ರಾಜಕಾರಣದಲ್ಲಿ ಕ್ಷಣಕ್ಕೊಂದು ತಿರುವು; ಏರುತ್ತಲೇ ಇದೆ ಏಕನಾಥ್ ಶಿಂಧೆ ಬಣದ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಮಹಾರಾಷ್ಟ್ರ ರಾಜಕಾರಣದಲ್ಲಿ ಕ್ಷಣಕ್ಕೊಂದು ತಿರುವು; ಏರುತ್ತಲೇ ಇದೆ ಏಕನಾಥ್ ಶಿಂಧೆ ಬಣದ ಸಂಖ್ಯೆ

What made Eknath Shinde turn against Shiv Sena | India News - Times of Indiaಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮತ್ತೆ ಮೂವರು ಶಾಸಕರು ಗೌಹಾತಿಗೆ ತೆರಳಿರುವ ಕಾರಣ ಏಕನಾಥ್ ಶಿಂಧೆ ಬಣದ ಸಂಖ್ಯೆ ಏರುತ್ತಲೇ ಇದೆ. ಇದರ ಮಧ್ಯೆ ಬಂಡಾಯ ಶಾಸಕರುಗಳು ಬೀಡುಬಿಟ್ಟಿರುವ ಗೌಹಾತಿಯ ಪಂಚತಾರಾ ಹೋಟೆಲ್ ಮುಂದೆ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ.

ಹೋಟೆಲ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದು, ಪೊಲೀಸರು ಹೋಟೆಲ್ ಸುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮುಂಬೈಗೆ ಭೇಟಿ ನೀಡಿದ್ದು, ತಮ್ಮ ಪಕ್ಷದ ನಾಯಕರು ಹಾಗೂ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಆದರೆ ಮಿತ್ರ ಪಕ್ಷಗಳ ನಾಯಕರು ಕಾದು ನೋಡುವ ತಂತ್ರ ಅನುಸರಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬಿಜೆಪಿ ನಾಯಕರು ಆ ಬಳಿಕವೇ ಮುಂದಿನ ನಡೆ ಅನುಸರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...