alex Certify BIG BREAKING: ಯತ್ನಾಳ್ ಕಾರಿಗೆ ಲಿಂಗಾಯತ ಸಂಘಟನೆ ಮುತ್ತಿಗೆ; ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯತ್ನಾಳ್ ಕಾರಿಗೆ ಲಿಂಗಾಯತ ಸಂಘಟನೆ ಮುತ್ತಿಗೆ; ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ಚಾಮರಾಜನಗರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ವೀರಶೈವ ಲಿಂಗಾಯತ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಲಿಂಗಾಯಿತ ಮೀಸಲಾತಿ ಹೋರಾಟ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಶಾಸಕ ಯತ್ನಾಳ್ ಕಾರನ್ನು ರಸ್ತೆ ಮಧ್ಯೆಯೇ ಅಡ್ಡಗಟ್ಟಿದ ಸಂಘಟನೆ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಯತ್ನಾಳ್ ವಿರುದ್ಧ ಘೋಷಣೆ ಕೂಗಿದರು.

ದಿಢೀರ್ ದೆಹಲಿ ಭೇಟಿ ವಿಚಾರ; ಖಾಸಗಿ ಕೆಲಸಕ್ಕಾಗಿ ಬಂದಿದ್ದೇನೆ ಎಂದ ಸಚಿವ ನಿರಾಣಿ

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ ನಡೆಸುತ್ತಿದ್ದೀರಿ ಅಲ್ಲದೇ ಪದೇ ಪದೇ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಆರೋಪ ಮಾಡುತ್ತಿರುವುದಾದರೂ ಯಾಕೆ ಎಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದೇ ವೇಳೆ ಹೋರಾಟದ ಹೆಸರಲ್ಲಿ ಸಮುದಾಯದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿರುವ ಯತ್ನಾಳ್ ಗೆ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಯತ್ನಾಳ್ ಅವರನ್ನು ಸುರಕ್ಷಿತವಾಗಿ ಗೆಸ್ಟ್ ಹೌಸ್ ಗೆ ಕರೆದೊಯ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...