alex Certify BIG BREAKING: ಯಾದಗಿರಿಯಲ್ಲಿ 0, ಅನೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ – ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯಾದಗಿರಿಯಲ್ಲಿ 0, ಅನೇಕ ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ – ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 1708 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 36 ಮಂದಿ ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 2463 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,18,476 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 28,83,947 ಕ್ಕೆ ಏರಿಕೆಯಾಗಿದೆ. 29,291 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 36,157 ಜನ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 386 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇವತ್ತು 793 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 11,751 ಸಕ್ರಿಯ ಪ್ರಕರಣಗಳು ಇವೆ.

ಚಿಕ್ಕಮಗಳೂರು 105, ದಕ್ಷಿಣಕನ್ನಡ 241, ಹಾಸನ 121, ಮೈಸೂರು 210, ಉಡುಪಿ 105, ಈ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ 0, ವಿಜಯಪುರ 1, ರಾಮನಗರ 3, ರಾಯಚೂರು 4, ಕೊಪ್ಪಳ 2, ಕಲಬುರಗಿ 3, ಹಾವೇರಿ 8, ಗದಗ 1, ಬೀದರ್ 8, ಬಳ್ಳಾರಿ 1, ಬಾಗಲಕೋಟೆಯಲ್ಲಿ ನಾಲ್ವರಿಗೆ ಸೋಂಕು ತಗುಲಿದೆ. ಹೀಗೆ ಅನೇಕ ಜಿಲ್ಲೆಗಳಲ್ಲಿ ಸೋಂಕು ಕಡಿಮೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...