alex Certify BIG BREAKING: ಯೋಗೀಶ್ ಗೌಡ ಹತ್ಯೆ ಕೇಸ್; ಮತ್ತೊಂದು ಪ್ರಕರಣದಲ್ಲೂ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯೋಗೀಶ್ ಗೌಡ ಹತ್ಯೆ ಕೇಸ್; ಮತ್ತೊಂದು ಪ್ರಕರಣದಲ್ಲೂ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲ್ಕರ್ಣಿಯವರಿಗೆ ಆ.11ರಂದು ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯನಾಶ ಪ್ರಕರಣ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಅವರಿಗೆ ಬಿಡುಗಡೆ ಭಾಗ್ಯವಿರಲಿಲ್ಲ. ಇದೀಗ ವಿನಯ್ ಕುಲ್ಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕೋವಿಡ್​ ನಿರ್ಬಂಧ ಗಾಳಿಗೆ ತೂರಿ ಶ್ರಾವಣ ಆಚರಣೆ…..! ವಿಡಿಯೋ ವೈರಲ್​

ಸಾಕ್ಷ್ಯನಾಶ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಇದೀಗ ವಿನಯ್ ಕುಲ್ಕರ್ಣಿಗೆ ಜಾಮೀನು ಮಂಜೂರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೆಷ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆದರೆ ವಿನಯ್ ಕುಲ್ಕರ್ಣಿ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ ಎಂದು ಕೋರ್ಟ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...