alex Certify BIG BREAKING: ರಾಜ್ಯದ ಮೊದಲ ಕೋಕಾ ಕೇಸ್ ತೀರ್ಪು; ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದ ಮೊದಲ ಕೋಕಾ ಕೇಸ್ ತೀರ್ಪು; ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳಗಾವಿ: ರಾಜ್ಯದ ಮೊದಲ ಕೋಕಾ ಪ್ರಕರಣ ಉದ್ಯಮಿ, ಬಿಜೆಪಿ ನಾಯಕ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಆರ್.ಎನ್.ನಾಯಕ್ ಹತ್ಯೆ ಪ್ರಕರಣದಲ್ಲಿ 9 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದ್ದ ಬೆಳಗಾವಿಯ ಕೋಕಾ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಇಂದಿಗೆ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಅಪರಾಧಿಗಳಾದ ಜಗದೀಶ್ ಪಟೇಲ್, ಅಭಿ ಬಂಡಗಾರ್, ಗಣೇಶ್ ಭಜಂತ್ರಿ ಹಾಗೂ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

BIG NEWS: ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ AAP ಸೇರ್ಪಡೆ

2013ರ ಡಿಸೆಂಬರ್ 21ರಂದು ಉದ್ಯಮಿ ಆರ್.ಎನ್ ನಾಯಕ್ ಅವರನ್ನು 3 ಕೋಟಿ ಹಫ್ತಾ ನೀಡದ ಕಾರಣಕ್ಕೆ ಸುಪಾರಿ ನೀಡಿ ಹತ್ಯೆ ಮಾಡಲಾಗಿತ್ತು. 7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ಕೋರ್ಟ್ ನ್ಯಾ.ಸಿ.ಎಂ.ಜೋಷಿ ಕಳೆದ ವಾರ ತೀರ್ಪು ಪ್ರಕಟಿಸಿ, ಬನ್ನಂಜೆ ರಾಜಾ ಸೇರಿದಂತೆ 9 ಆರೋಪಿಗಳು ದೋಷಿಗಳು ಎಂದು ಪ್ರಕಟಿಸಿದ್ದರು. ಇದೀಗ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...