alex Certify BIG BREAKING: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮಹಾರಾಷ್ಟ್ರದತ್ತ ತೆರಳುತ್ತಿದ್ದ ಮುರುಘಾಶ್ರೀ ಪೊಲೀಸ್‌ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಮಹಾರಾಷ್ಟ್ರದತ್ತ ತೆರಳುತ್ತಿದ್ದ ಮುರುಘಾಶ್ರೀ ಪೊಲೀಸ್‌ ವಶಕ್ಕೆ

ಬಂಕಾಪುರ: ಮಕ್ಕಳ ಮೇಲೆ ಲೈಂಗಿಕ ದೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಪೊಲೀಸರು ಬಂಕಾಪುರ ಬಳಿ ಹೆದ್ದಾರಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ಮಠದಿಂದ ಮಹಾರಾಷ್ಟ್ರದತ್ತ ಸಾಗುತ್ತಿದ್ದ ಶ್ರೀಗಳನ್ನು ಹಾವೇರಿ ಜಿಲ್ಲೆ ಬಂಕಾಪುರ ಬಳಿ ಹೆದ್ದಾರಿಯಲ್ಲಿ ಮಾರ್ಗ ಮಧ್ಯೆ ತಡೆದ ಪೊಲೀಸರು, ಮುರುಘಾಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ.

ಮುರುಘಾಶ್ರೀಗಳ ವಿರುದ್ಧ ಮಠದಲ್ಲಿಯೇ ವ್ಯಾಸಂಗ ಮಾಡುತ್ತಿದ್ದ ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಮುರುಘಾಶ್ರೀ ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಅಜ್ಞಾತ ಸ್ಥಳದತ್ತ ತೆರಳುತ್ತಿದ್ದ ಶ್ರೀಗಳನ್ನು ಬಂಧಿಸಿರುವ ಪೊಲೀಸರು ಚಿತ್ರದುರ್ಗದತ್ತ ಕರೆತರುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...