alex Certify BIG BREAKING: ವಿರೋಧಿ ಬಣಕ್ಕೆ ಟಾಂಗ್ ನೀಡಿದ ಬಿ ಎಸ್ ವೈ; ಹೆಚ್.ವಿಶ್ವನಾಥ್ ಗೂ ಪರೋಕ್ಷ ಎಚ್ಚರಿಕೆ ಕೊಟ್ಟ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿರೋಧಿ ಬಣಕ್ಕೆ ಟಾಂಗ್ ನೀಡಿದ ಬಿ ಎಸ್ ವೈ; ಹೆಚ್.ವಿಶ್ವನಾಥ್ ಗೂ ಪರೋಕ್ಷ ಎಚ್ಚರಿಕೆ ಕೊಟ್ಟ ಸಿಎಂ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಒಂದಿಬ್ಬರು ಮಾತನಾಡಿದರೆ ಆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಎಲ್ಲರೂ ಒಗ್ಗಟ್ಟಾಗಿ ಕೆಲಸಗಳನ್ನು ಮಾಡುತ್ತಿದ್ದೇವೆ. ಒಂದಿಬ್ಬರು ಹೇಳಿಕೆಗಳನ್ನು ನೀಡುತ್ತಿದ್ದರೆ ಅಂತವರನ್ನು ಕರೆದು ಸಮಸ್ಯೆಗಳನ್ನು ಕೇಳಿ ಬಗೆಹರಿಸಲಾಗುವುದು. ಹೊರತು ಪಕ್ಷದಲ್ಲಿ ಯಾವುದೇ ರೀತಿ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಟ್ಯಾಗ್ ಹೊಂದಿರದ ವಾಹನಗಳಿಗೆ ಇರೋಲ್ಲ ದೆಹಲಿ ಪ್ರವೇಶ

ಇನ್ನು ವಿಜಯೇಂದ್ರ ವಿರುದ್ಧದ ಆರೋಪ ಆಧಾರ ರಹಿತ. ನೀರಾವರಿ ಇಲಾಖೆಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ಹೆಚ್.ವಿಶ್ವನಾಥ್ ಅವರ ಯಾವುದೇ ಹೇಳಿಕೆಗಳ ಬಗ್ಗೆಯೂ ನಾನು ಮಾತನಾಡಲ್ಲ. ಅವರ ವಿರುದ್ಧ ಕ್ರಮದ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳುವ ಮೂಲಕ ವಿರೋಧಿ ಬಣಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...