alex Certify BIG BREAKING: ವಿರೋಧಿ ಬಣಕ್ಕೆ ಸಿಎಂ ಖಡಕ್ ಸಂದೇಶ; ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಬಿ.ಎಸ್.ವೈ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿರೋಧಿ ಬಣಕ್ಕೆ ಸಿಎಂ ಖಡಕ್ ಸಂದೇಶ; ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಬಿ.ಎಸ್.ವೈ.

ನವದೆಹಲಿ: ದೆಹಲಿಯಿಂದಲೇ ವಿರೋಧಿ ಬಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವರಿಷ್ಠರು ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಜೆ.ಪಿ. ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ವಿಚಾರ ಶುದ್ಧ ಸುಳ್ಳು. ರಾಜೀನಾಮೆ ನಿಡುವಂತೆ ಹೈಕಮಾಂಡ್ ನನಗೆ ಸೂಚಿಸಿಲ್ಲ. ಹಾಗಾಗಿ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ ಎಂದರು.

SPECIAL: ಸ್ವಂತ ಖರ್ಚಿನಿಂದ ಅಣೆಕಟ್ಟೆ ನಿರ್ಮಿಸಿಕೊಂಡ ಗ್ರಾಮಸ್ಥರು

ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಎದ್ದಿರುವ ಚರ್ಚೆ ಊಹಾಪೋಹಗಳಿಗೆ ಸಿಎಂ ಬಿ.ಎಸ್.ವೈ. ಮತ್ತೊಮ್ಮೆ ತೆರೆ ಎಳೆದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...