alex Certify Big Breaking: ಶಿವಮೊಗ್ಗ ಗಲಭೆ; ಮಾಜಿ ಸಚಿವ ಈಶ್ವರಪ್ಪರಿಂದ ಸ್ಪೋಟಕ ಮಾಹಿತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಶಿವಮೊಗ್ಗ ಗಲಭೆ; ಮಾಜಿ ಸಚಿವ ಈಶ್ವರಪ್ಪರಿಂದ ಸ್ಪೋಟಕ ಮಾಹಿತಿ ಬಹಿರಂಗ

ಟಿಪ್ಪು – ಸಾವರ್ಕರ್ ಫ್ಲೆಕ್ಸ್ ಕುರಿತಂತೆ ಶಿವಮೊಗ್ಗದಲ್ಲಿ ಆರಂಭವಾದ ಗಲಭೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದು ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್ ಪತಿ ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಕೋಮು ಗಲಭೆಯನ್ನು ಆರಂಭಿಸಬೇಕೆಂಬ ಕಾರಣಕ್ಕಾಗಿಯೇ ಈ ಕೃತ್ಯವನ್ನು ಮಾಡಲಾಗಿದೆ ಎಂದು ಆರೋಪಿಸಿರುವ ಈಶ್ವರಪ್ಪ, ಆದರೆ ಕಾಂಗ್ರೆಸ್ ನವರು ಬಿಜೆಪಿ ಅವರ ಮೇಲೆ ವೃಥಾ ಆರೋಪ ಮಾಡುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಹಿಂದೂ ಸಮಾಜ ಸಶಕ್ತವಾಗಿದೆ. ಮುಸ್ಲಿಂ ಗೂಂಡಾಗಳು ತಮ್ಮ ವರ್ತನೆಯನ್ನು ಇದೇ ರೀತಿ ಮುಂದುವರಿಸಿದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಈಶ್ವರಪ್ಪ, ತಾವು ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...