alex Certify BIG BREAKING: ಸಿಎಂ BSYಗೆ ಅಮಿತ್ ಶಾ ಬುಲಾವ್; ಏರ್ ಪೋರ್ಟ್ ನಿಂದ ವಾಪಸ್ ತೆರಳಿದ ಯಡಿಯೂರಪ್ಪ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ BSYಗೆ ಅಮಿತ್ ಶಾ ಬುಲಾವ್; ಏರ್ ಪೋರ್ಟ್ ನಿಂದ ವಾಪಸ್ ತೆರಳಿದ ಯಡಿಯೂರಪ್ಪ…!

ನವದೆಹಲಿ: ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ವರಿಷ್ಠರ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್ ಆಗಲು ನಿರ್ಧರಿಸಿದ್ದರು. ಆದರೆ ಇದೀಗ ಸ್ವತ: ಅಮಿತ್ ಶಾ ಸಿಎಂ ಗೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿದ್ದ ಸಿಎಂ ಯಡಿಯೂರಪ್ಪ, ಬಳಿಕ ಪುತ್ರ ಬಿ.ವೈ.ವಿಜಯೇಂದ್ರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದ್ದರು. ಬಳಿಕ ಅಮಿತ್ ಶಾ ಭೇಟಿಗೆ ನಿರ್ಧರಿಸಿದ್ದರು. ಆದರೆ ಸಾಧ್ಯವಾಗದೇ ಬೆಂಗಳೂರಿಗೆ ಹಿಂದಿರುಗಲು ಏರ್ ಪೋರ್ಟ್ ಗೆ ಬಂದಿದ್ದರು. ಅಷ್ಟರಲ್ಲಿ ಮತ್ತೆ ಅಮಿತ್ ಶಾ ಸಿಎಂ ಯಡಿಯೂರಪ್ಪನವರಿಗೆ ಬುಲಾವ್ ನೀಡಿದ್ದು, ಏರ್ ಪೊರ್ಟ್ ನಿಂದ ವಾಪಸ್ ಅಮಿತ್ ಶಾ ನಿವಾಸಕ್ಕೆ ಯಡಿಯೂರಪ್ಪ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ʼಜನ್ ಧನ್ʼ ಖಾತೆ ಹೊಂದಿರುವವರಿಗೊಂದು ಮಹತ್ವದ ಸುದ್ದಿ

ದೆಹಲಿ ಪ್ರವಾಸದಲ್ಲಿರುವ ಸಿಎಂ ಬಿ.ಎಸ್.ವೈ. ನಿನ್ನೆ ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಇಂದು ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...