alex Certify BIG BREAKING : ಬೆಂಗಳೂರಿನಲ್ಲಿ ತಡರಾತ್ರಿ `ಹಿಟ್ ಆ್ಯಂಡ್ ರನ್’ ಗೆ ತಂದೆ,ಮಗ ಬಲಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಬೆಂಗಳೂರಿನಲ್ಲಿ ತಡರಾತ್ರಿ `ಹಿಟ್ ಆ್ಯಂಡ್ ರನ್’ ಗೆ ತಂದೆ,ಮಗ ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಂಎಸ್ ರಾಮಯ್ಯ ಆಸ್ಪತ್ರೆ ಬಳಿ ನಡೆದಿದೆ.

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಇಸ್ರೋ ಸರ್ಕಲ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಕಾರು ಡಿಕ್ಕಿಯಾಗಿ ತಂದೆ,ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೃತರನ್ನು ತಂದೆ ರಘು, ಮಗ ಚಿರಂಜೀವಿ ಎಂದು ಗುರುತಿಸಲಾಗಿದೆ.ಸ್ಕೂಟರ್ ಗೆ ಡಿಕ್ಕಿ ಹೊಡೆದು ಕಾರು ಸಮೇತ ಪರಾರಿಯಾಗಲು ಯತ್ನಿಸಿದ ಕಾರುನ್ನು ಸ್ಥಳೀಯರು ತಡೆದಿದ್ದಾರೆ. ಆದರೆ ಇಬ್ಬರು ಪರಾರಿಯಾಗಿದ್ದು, ಆಕಾಶ್ ಎಂಬುವನನ್ನು ಸ್ಥಳೀಯರು ಹಿಡಿದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...