alex Certify BIG NEWS: ʼಅನ್ನಭಾಗ್ಯʼ ಯೋಜನೆ; 1 ವಾರ ಟೈಂ ಕೇಳಿದ ಮೂರು ಏಜೆನ್ಸಿಗಳು; ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಅನ್ನಭಾಗ್ಯʼ ಯೋಜನೆ; 1 ವಾರ ಟೈಂ ಕೇಳಿದ ಮೂರು ಏಜೆನ್ಸಿಗಳು; ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೂರು ಏಜೆನ್ಸಿಗಳಿಗೆ ಸಲಹೆಗಳನ್ನು ನೀಡಿದ್ದೆವು. ಅವರು ಒಂದು ವಾರ ಸಮಯಾವಕಾಶ ಕೇಳಿದ್ದಾಗಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನ್ನಭಾಗ್ಯ ಅಕ್ಕಿ ಯೋಜನೆ ಸಭೆ ಬಳಿಕ ಮಾತನಾಡಿದ ಸಚಿವರು, ಅಕ್ಕಿ ದರ ನಿಗದಿ ಮಾಡುವುದು ಈ ಮೂರು ಏಜೆನ್ಸಿಗಳಿಗೆ ಬಿಟ್ಟದ್ದು. ಒಂದು ವಾರದೊಳಗೆ ಟ್ರೇಡರ್ಸ್, ಮಿಲ್ಲರ್ಸ್ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಈ ಹಿಂದೆಯೂ ರಾಜ್ಯದಲ್ಲಿ ಇದೇ ಸಂಸ್ಥೆಗಳಿಂದ ಅಕ್ಕಿ ತರಿಸಲಾಗಿತ್ತು. ಸಂಸ್ಥೆಗಳಿಗೆ ಅಕ್ಕಿ ಪೂರೈಕೆ ಬಳಿಕ ಸರ್ಕಾರಕ್ಕೆ ಅಕ್ಕಿ ಸರಬರಾಜಾಗುತ್ತದೆ. ನಾವು ಕೊಟ್ಟ ಭರವಸೆಯಂತೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...