alex Certify BIG NEWS: ಅಘನಾಶಿನಿ ಆಪತ್ತಿನಲ್ಲಿದೆ; ಚಿಪ್ಪಿಕಲ್ಲು ಗಣಿಗಾರಿಕೆ ನಿಲ್ಲಿಸಿ, ನದಿ ಉಳಿಸಿ; ಹೋರಾಟಕ್ಕೆ ಕರೆಕೊಟ್ಟ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಘನಾಶಿನಿ ಆಪತ್ತಿನಲ್ಲಿದೆ; ಚಿಪ್ಪಿಕಲ್ಲು ಗಣಿಗಾರಿಕೆ ನಿಲ್ಲಿಸಿ, ನದಿ ಉಳಿಸಿ; ಹೋರಾಟಕ್ಕೆ ಕರೆಕೊಟ್ಟ HDK

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಜೀವಸೆಲೆ ಅಘನಾಶಿನಿ ಆಪತ್ತಿನಲ್ಲಿದೆ. ಆ ನದಿ ಉಳಿಸಿಕೊಳ್ಳುವ ಬಗ್ಗೆ ಒಟ್ಟಾಗಿ ಹೋರಾಡಬೇಕಿದೆ. ಈ ಪ್ರಯತ್ನಕ್ಕೆ ನನ್ನ ಮತ್ತು ಜೆಡಿಎಸ್ ಪಕ್ಷದ ಬೆಂಬಲ ಇದೆ. ನದಿಗಳನ್ನು ಉಳಿಸಿಕೊಳ್ಳುವುದರ ಜತೆಗೆ ಆ ನದಿಗಳ ನೀರನ್ನು ಬದುಕಿಗೆ ಬಳಸಿಕೊಳ್ಳುವ ಶುಭ ಸಂಕಲ್ಪದೊಂದಿಗೆ ನಾವು ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸ್ಥಳೀಯರ ಜೀವನಾಧಾರವಾಗಿದ್ದ ಚಿಪ್ಪಿಕಲ್ಲಿನ ಅಂಕೆ ಇಲ್ಲದ ಗಣಿಗಾರಿಕೆ ಅಘನಾಶಿನಿಯ ಅಸ್ತಿತ್ವಕ್ಕೇ ಧಕ್ಕೆ ತಂದಿದೆ. ಇಂಥ ನದಿಯನ್ನು ಕಳೆದುಕೊಂಡರೆ ಅದೊಂದು ರಾಷ್ಟ್ರೀಯ ದುರಂತವೇ ಸರಿ. ಸರ್ಕಾರ ಕೂಡಲೇ ಅಘನಾಶಿನಿ ರಕ್ಷಣೆಗೆ ಅತ್ಯುನ್ನತ ಕಾರ್ಯಪಡೆ ರಸಿಚಿ ನದಿ ಉಳಿವಿಗೆ ವಿಜ್ಞಾನಿಗಳು ನೀಡಿರುವ ವರದಿಗಳನ್ನು ಪರಿಗಣಿಸಿ ಕ್ರಮ ವೈಹಿಸಬೇಕು ಎಂದು ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಅತಿ ವಿಶಾಲ ಅಳಿವೆಯುಳ್ಳ, ಅತ್ಯಂತ ಶುದ್ಧ ನದಿಯಾದ ಅಘನಾಶಿನಿಯನ್ನು ಉಳಿಸಬೇಕು. ಇಲ್ಲಿ ನಡೆಯುತ್ತಿರುವ ಚಿಪ್ಪಿಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಲ್ಲಿಸಬೇಕು ಎಂಬುದು ಸರ್ಕಾರಕ್ಕೆ ನನ್ನ ಆಗ್ರಹ. ಈ ಹೋರಾಟದಲ್ಲಿ ನಾನೂ ಅಘನಾಶಿನಿಯ ದನಿಯಾಗುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...