alex Certify BIG NEWS: ಅಚ್ಛೇದಿನದ ಭ್ರಮೆಯಲ್ಲಿ ಬೆಂಕಿಯಲ್ಲಿ ಬೇಯುತ್ತಿದೆ ಜನರ ಬದುಕು…; ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರಿಗೆ ಮತ್ತೆ ಟಾಂಗ್ ನೀಡಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಚ್ಛೇದಿನದ ಭ್ರಮೆಯಲ್ಲಿ ಬೆಂಕಿಯಲ್ಲಿ ಬೇಯುತ್ತಿದೆ ಜನರ ಬದುಕು…; ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರಿಗೆ ಮತ್ತೆ ಟಾಂಗ್ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಎಲ್ ಪಿ ಜಿ ಸಿಲಿಂಡರ್ ದರ ಮತ್ತೆ ಏರಿಕೆಯಾಗಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, 7 ವರ್ಷಗಳ ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ ಎಂದು ಟೀಕಿಸಿದ್ದಾರೆ.

ಕೋವಿಡ್, ಬೆಲೆ ಏರಿಕೆಯಿಂದ ಜನ ಜೀವನ ಹಳ್ಳಹಿಡಿದು ಹೋಗಿದೆ. ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಅನಿಯಂತ್ರಿತ ಬೆಲೆ ಏರಿಕೆ ಮಾಫಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾತನಾಡಲಿ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಹೆಸರಲ್ಲಿ ಸೋಗಲಾಡಿತನ ತೋರಿಸುವ ಆರ್ ಎಸ್ ಎಸ್ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...