alex Certify BIG NEWS: ಅಧಿಕಾರಿಗಳ ಕಿತ್ತಾಟ ಪ್ರಕರಣ; ‘ಯಥಾ ರಾಜಾ ತಥಾ ಅಧಿಕಾರಿಗಳು’ ಎಂದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರಿಗಳ ಕಿತ್ತಾಟ ಪ್ರಕರಣ; ‘ಯಥಾ ರಾಜಾ ತಥಾ ಅಧಿಕಾರಿಗಳು’ ಎಂದ ಡಿ.ಕೆ.ಶಿವಕುಮಾರ್

ದಾವಣಗೆರೆ: ಮಹಿಳಾ ಐಎಎಸ್ ಅಧಿಕಾರಿಗಳ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಥಾ ರಾಜಾ ತಥಾ ಪ್ರಜಾ ಎಂಬ ಮಾತಿದೆ. ಅದೇ ರೀತಿ ಯಥಾ ರಾಜಾ ತಥಾ ಅಧಿಕಾರಿಗಳು… ಆಳ್ವಿಕೆ ಮಾಡುವವರು ಹೇಗೋ ಹಾಗೇ ಅಧಿಕಾರಿಗಳೂ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಡಿ.ಕೆ.ಶಿ, ಅಧಿಕಾರಕ್ಕಾಗಿ ರಾಜ್ಯದಲ್ಲಿ ಶಾಸಕರು, ಸಚಿವರು ಏನೆಲ್ಲಾ ಮಾಡುತ್ತಿದ್ದಾರೆ ಎಂಬುದು ಎಲ್ಲರ ಗಮನಕ್ಕೆ ಬರುತ್ತಿದೆ. ಅಂದರಂತೆ ಈಗ ಅಧಿಕಾರಿಗಳು ಕೂಡ ಕಿತ್ತಾಟ ನಡೆಸಿದ್ದಾರೆ. ನಾಚಿಕೆಯಾಗಬೇಕು ಇವರಿಗೆ ಎಂದು ಗುಡುಗಿದ್ದಾರೆ.

ಕೊರೊನಾದಂತಹ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು ಸರ್ಕಾರದಿಂದ ಹಿಡಿದು ಅಧಿಕಾರಿಗಳವರೆಗೂ ಜಟಾಪಟಿ, ಜಗಳಗಳಲ್ಲಿ ತೊಡಗಿದ್ದಾರೆ. ಮಂತ್ರಿಗಳು, ಶಾಸಕರು ಕೂಡ ಬೇಜವಾಬ್ದಾರಿ ಮೆರೆದಿದ್ದಾರೆ. ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡುತಿದ್ದರೂ ಮುಖ್ಯಮಂತ್ರಿಗಳು ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší