alex Certify BIG NEWS: ಅಪಘಾತದಲ್ಲಿ ಮೃತಪಟ್ಟ 9 ಜನರಲ್ಲಿ 6 ಜನರ ನೇತ್ರದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಘಾತದಲ್ಲಿ ಮೃತಪಟ್ಟ 9 ಜನರಲ್ಲಿ 6 ಜನರ ನೇತ್ರದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರ್ಮಿಕರು

ತುಮಕೂರು: ತುಮಕೂರಿನ ಕಳ್ಳಂಬೆಳ್ಳ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ 9 ಜನ ಕಾರ್ಮಿಕರು ಸಾವನ್ನಪ್ಪಿದ್ದು, 9 ಜನರಲ್ಲಿ 6 ಕಾರ್ಮಿಕರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಕ್ರೂಸರ್ ಚಾಲಕ ಕೃಷ್ಣ, ಸುಜಾತಾ, ಪ್ರಭುಸ್ವಾಮಿ, ಸಿದ್ದಯ್ಯ ಸ್ವಾಮಿ, ನಿಂಗಣ್ಣ, ಮೀನಾಕ್ಷಿ ಎಂಬುವವರ ನೇತ್ರದಾನ ಮಾಡಲಾಗಿದೆ ಎಂದು ತಹಶಿಲ್ದಾರ್ ಮಮತಾ ಮಾಹಿತಿ ನೀಡಿದ್ದಾರೆ.

ಕೊನೆ ಶ್ರಾವಣ ಶನಿವಾರದ ಪೂಜೆಗೆಂದು ರಾಯಚೂರಿನ ತಮ್ಮ ತಮ್ಮ ಊರುಗಳಿಗೆ ತೆರಳಿದ್ದ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಮತ್ತೆ ಬೆಂಗಳೂರಿಗೆ ಟೆಂಪೋ ಟ್ರಾವಲ್ ನಲ್ಲಿ ವಾಪಸ್ ಆಗಿದ್ದರು. ಈ ವೇಳೆ ಇಂದು ಮುಂಜಾನೆ ಕಳ್ಳಂಬೆಳ್ಳ ಬಳಿ ಟೆಂಪೋ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದರು. 15 ಜನರು ಗಂಭೀರವಾಗಿ ಗಾಯಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...