alex Certify BIG NEWS: ಅರಗ ಜ್ಞಾನೇಂದ್ರ ಒಬ್ಬ ನಾಲಾಯಕ್; ಡಿ.ಕೆ.ಶಿವಕುಮಾರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರಗ ಜ್ಞಾನೇಂದ್ರ ಒಬ್ಬ ನಾಲಾಯಕ್; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಇವರು ಮಾತ್ರ ಎಲ್ಲಾ ಕಡೆಗಳಲ್ಲೂ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ ಎಂದು ಗುಡುಗಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, 144 ಸೆಕ್ಷನ್ ಜಾರಿಯಾದರೂ ಬಿಜೆಪಿ ನಾಯಕರು ಕಾರ್ಯಕ್ರಮ ಮಾಡ್ತಿದ್ದಾರೆ. ಆದರೆ ಪೊಲೀಸರು ಈ ಬಗ್ಗೆ ಗಮನ ಕೊಡುತ್ತಿಲ್ಲ. ಇಲ್ಲಿ ನಮ್ಮ ಮೇಲೆ ಕೇಸ್ ಹಾಕುತ್ತಿದ್ದಾರೆ. ಬಿಜೆಪಿ ನಾಯಕರ ಮಾತಿನಂತೆ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ. ನಮಗೆ ತೊಂದರೆ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕಣ್ಣು ಉರಿ ನಿವಾರಿಸಲು ಇಲ್ಲಿದೆ ಮನೆ ಮದ್ದು

ಯಾರು ಯಾರು ತೊಂದರೆ ಕೊಡ್ತಿದ್ದಾರೆ ಎಲ್ಲರ ಹೆಸರು ನೆನಪಿದೆ. ಅಧಿಕಾರ ಅನ್ನುವುದು ಶಾಶ್ವತ ಅಲ್ಲ, ಇಂದು ಇರುತ್ತೆ ನಾಳೆ ಹೋಗುತ್ತೆ. ಆದರೆ ಕಾನೂನು ಎಂಬುದು ಎಲ್ಲರಿಗೂ ಒಂದೆ. ಕಮ್ಯೂನಲ್ ಗಲಾಟೆ ವೇಳೆಯೂ ಸಚಿವ ಈಶ್ವರಪ್ಪ ಹೋದಾಗ ಏನು ಕ್ರಮ ಕೈಗೊಂಡರು? ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ಒಬ್ಬ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...