alex Certify BIG NEWS: ‘ಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು; ಓಲೈಕೆಗೂ ಒಂದು ಮಿತಿಯಿದೆ; ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ BJP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು; ಓಲೈಕೆಗೂ ಒಂದು ಮಿತಿಯಿದೆ; ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ BJP

ಬೆಂಗಳೂರು: ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಹಾಕಿಕೊಳ್ತಾರೆ ಅದನ್ನು ಪ್ರಶ್ನಿಸುತ್ತೀರಾ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ, ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ಸಿದ್ದರಾಮಯ್ಯನವರೇ ನೀವು ಅದೆಲ್ಲವನ್ನೂ ದಾಟಿ ಸಾಗುತ್ತಿದ್ದೀರಿ ಎಂದು ಗುಡುಗಿದೆ

ಹಿಜಾಬ್‌, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸವನ್ನು ಮೊದಲು ಅರಿತುಕೊಳ್ಳಿ. ಹಿಜಾಬ್‌ ನಿಷೇಧಿಸಿಲ್ಲ, ತರಗತಿಯೊಳಗೆ ಹಿಜಾಬ್‌ಗೆ ಅವಕಾಶ ನಿರಾಕರಿಸಲಾಗಿದೆ, ಅಷ್ಟೇ ಎಂದು ಸರಣಿ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಹಿಜಾಬ್‌ಗೆ ಎಲ್ಲಿ ವಿರೋಧ ವ್ಯಕ್ತವಾಗಿದೆ ಎನ್ನುವುದರ ಬಗ್ಗೆಯೇ ಸಿದ್ದರಾಮಯ್ಯನವರಿಗೆ ಗೊಂದಲವಿದೆ. ಹಾದಿಬೀದಿಯಲ್ಲಿ, ಕಾಲೇಜಿನ ಆವರಣದಲ್ಲಿ ಹಿಜಾಬ್‌ ನಿಷೇಧಿಸಿಲ್ಲ. ವಸ್ತ್ರಸಂಹಿತೆಯ ಪ್ರಕಾರ ತರಗತಿಯಲ್ಲಿ ಅವಕಾಶ ನೀಡಿಲ್ಲ. ಹಿಜಾಬ್‌ ಒಳಗೆ ಅಡಗಿರುವ ʼಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಹಿಂದೂಗಳು ಎಂದರೆ ಏಕೆ ಅಸಹನೆ? ಚುನಾವಣೆ ಹತ್ತಿರ ಬಂದಾಗಲೆಲ್ಲ ʼಸಾಫ್ಟ್‌ ಹಿಂದುತ್ವʼ ಎಂಬ ಗುರಾಣಿ ಹಿಡಿಯುವ ಕಾಂಗ್ರೆಸ್‌ ಉಳಿದ ಸಮಯದಲ್ಲಿ ಹಿಂದೂ ವಿರೋಧಿ ನೀತಿಗಳನ್ನೇ ಅನುಸರಿಸುತ್ತದೆ ಎಂದು ವಾಗ್ದಾಳಿ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...