alex Certify BIG NEWS: ಅವರಿಬ್ಬರೂ ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸುವವರು; ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಸಿಎಂ ಕೆಂಡಾಮಂಡಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅವರಿಬ್ಬರೂ ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸುವವರು; ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಸಿಎಂ ಕೆಂಡಾಮಂಡಲ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಒಳಜಗಳ ಎಲ್ಲರಿಗೂ ಗೊತ್ತಿರುವ ವಿಚಾರ, ಸ್ವಾರ್ಥಕ್ಕಾಗಿ ಅಧಿಕಾರವನ್ನು ಬಳಸಿಕೊಳ್ಳುವ ಜನರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಡಿಕೆಶಿ ಒಳಜಗಳ ಹೊಸದೇನಲ್ಲ, ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಅವರಿಬ್ಬರೂ ಸ್ವಾರ್ಥಕ್ಕಾಗಿ ಅಧಿಕಾರ ಬಳಸಿಕೊಳ್ಳುವವರು. ಜನಹಿತಕ್ಕಾಗಿ ಯಾವ ಕೆಲಸವನ್ನೂ ಮಾಡಲ್ಲ ಎಂದು ಗುಡುಗಿದರು.

ಕಾಂಗ್ರೆಸ್ ಯಾವಾಗಲೂ ಜನಪರ ಕೆಲಸ ಮಾಡಲ್ಲ, ಕೇವಲ ಸ್ಥಾರ್ಥ ಸಾಧನೆಯೊಂದೇ ಅವರ ಉದ್ದೇಶ. ಆಡಳಿತ ಪಕ್ಷವಾಗಿದ್ದಾಗಲೂ ಅಷ್ಟೇ, ವಿಪಕ್ಷದಲ್ಲಿದ್ದಾಗಲೂ ಅಷ್ಟೇ. ಅಧಿಕಾರ ಹೇಗೆ ಹಿಡಿಯಬೇಕು? ಹೇಗೆ ತಮ್ಮ ಸ್ವಾರ್ಥ ಸಾಧಿಸಬೇಕು ಎಂಬುದಷ್ಟೇ ಅವರ ಉದ್ದೇಶ. ಕಾಂಗ್ರೆಸ್ ನಾಯಕರ ರೀತಿ-ನೀತಿ ಎಂದಿಗೂ ಬದಲಾಗುವುದಿಲ್ಲ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...