alex Certify BIG NEWS: ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಿಸಿದ ಹೊಯ್ಸಳ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಿಸಿದ ಹೊಯ್ಸಳ ಪೊಲೀಸರು

ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ 24 ವರ್ಷದ ವಿದ್ಯಾರ್ಥಿಯನ್ನು ರಕ್ಷಿಸುವಲ್ಲಿ ಹೊಯ್ಸಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ದಕ್ಷಿಣದ ಕನಕಪುರ ರಸ್ತೆಯಲ್ಲಿರುವ ವಿಶ್ವ ವಿದ್ಯಾಲಯದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಈ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಗಾಯಾಳು ವಿದ್ಯಾರ್ಥಿ ಸಾರಕ್ಕಿ ಬಳಿಯ ಪಿಜಿಯಲ್ಲಿ ನೆಲೆಸಿದ್ದು ಪುಣೆ ಮೂಲದವನಾಗಿದ್ದಾನೆ. ಈತ ತನ್ನ ಸ್ನೇಹಿತರಿಗೆ ನಾನು ಸಾಯುತ್ತಿದ್ದೇನೆ ಎಂದು ಮೆಸೇಜ್​ ಮಾಡಿದ್ದ ಎನ್ನಲಾಗಿದೆ. ಈ ಮೆಸೇಜ್​ ಓದಿದ ಸ್ನೇಹಿತ ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದ ಎನ್ನಲಾಗಿದೆ.

ಈ ಸಂದೇಶವನ್ನು ಸಮೀಪದಲ್ಲಿಯೇ ಗಸ್ತು ತಿರುಗುತ್ತಿದ್ದ ಹೊಯ್ಸಳ ವಾಹನಕ್ಕೆ ರವಾನಿಸಲಾಗಿತ್ತು. ಜೆಪಿ ನಗರ ಪೊಲೀಸ್​ ಠಾಣೆಯ ಸಹಾಯಕ ಸಬ್​ ಇನ್​ಸ್ಪೆಕ್ಟರ್​ ರಮೇಶ್​ ಬಿ ಹಾಗೂ ಮುಖ್ಯ ಪೇದೆ ಚಂದ್ರಶೇಖರಯ್ಯ ಇಬ್ಬರೂ ಸೇರಿ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಯನ್ನು ಪ್ರಾಣಾಪಾಯದಿಂದ ಕಾಪಾಡಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳುವ ವೇಳೆ ವಿದ್ಯಾರ್ಥಿ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದ. ಕೂಡಲೇ ಪೊಲೀಸರು ಆ್ಯಂಬುಲೆನ್ಸ್​ಗೆ ಕರೆ ಮಾಡಿದ್ದಾರೆ ಹಾಗೂ ವಿದ್ಯಾರ್ಥಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರ್ಥಿ ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...