alex Certify BIG NEWS: ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಕೊಪ್ಪಳ: ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ತುರ್ತು ಪರಿಸ್ಥಿತಿ ಉದ್ದೇಶಪೂರ್ವಕವಾಗಿ ಜಾರಿಗೆ ತಂದಿದ್ದು ಎಂದು ಆರೋಪಿಸುತ್ತಿದ್ದಾರೆ. ಇವರು ಸರ್ಕಾರಗಳನ್ನೇ ಕಿತ್ತು ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೊಪ್ಪಳದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದು ಮಾರಕ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಆಪರೇಷನ್ ಕಮಲವೇ ಪ್ರಜಾಪ್ರಭುತ್ವಕ್ಕೆ ಮಾರಕ. ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿದ್ದು ಯಾರು? ಮಧ್ಯಪ್ರದೇಶದಲ್ಲಿ ಸರ್ಕಾರ ಕಿತ್ತು ಹಾಕಿದ್ದು ಯಾರು? ಇದೆಲ್ಲ ಆಪರೇಷನ್ ಕಮಲವಲ್ಲವೇ? ಇದು ಪ್ರಜಾಪ್ರಭುತ್ವಕ್ಕೆ ಮಾರಕವಲ್ಲವೇ? ಎಂದು ಪ್ರಶ್ನಿಸಿದರು.

ಆಪರೇಷನ್ ಕಮಲಕ್ಕೆ ಪಾಪದ ಹಣ ಖರ್ಚು ಮಾಡುತ್ತಾರೆ. ಬಿಜೆಪಿಯವರ ಆಪರೇಷನ್ ಕಮಲಕ್ಕೆ ಇಂದು ಹಲವು ರಾಜ್ಯಗಳಲ್ಲಿ ಸರ್ಕಾರ ಪತನವಾಗುತ್ತಿದೆ. ಇಂತಹ ಮಾರಕವಾದ ರಾಜಕಾರಣ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...