alex Certify BIG NEWS: ಆರ್. ಅಶೋಕ್ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ ಆಮೇಲೆ ಒಕ್ಕಲಿಗರಿಗೆ ಮೀಸಲಾತಿ ಕೊಡೋಣ; ಟಾಂಗ್ ನೀಡಿದ ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆರ್. ಅಶೋಕ್ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ ಆಮೇಲೆ ಒಕ್ಕಲಿಗರಿಗೆ ಮೀಸಲಾತಿ ಕೊಡೋಣ; ಟಾಂಗ್ ನೀಡಿದ ಯತ್ನಾಳ್


ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನಾದರೂ ಕೊಡಿ, abcz ಯಾವುದಾದರೂ ಕೊಡಿ. ಆದರೆ ಅದಕ್ಕೆ 2ಎಗೆ ಇರುವ ಸೌಲಭ್ಯ ಇರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಬಡವರಿಗಾಗಿ ಮಾತ್ರ ನಾವು ಮೀಸಲಾತಿ ಕೇಳ್ತಾ ಇದ್ದೇವೆ. ನನ್ನ ಹಾಗೆ ಶಾಸಕ ಆದವರಿಗೆ, ಡಿಸಿ ಆದವರಿಗೆ, ಶ್ರೀಮಂತರಿಗೆ ಈ ಮೀಸಲಾತಿ ಬೇಡ……ಈ ಕಂಡಿಷನ್ ಹಾಕಿಯೆ ಮೀಸಲಾತಿ ನೀಡಿ ಎಂದು ಸಲಹೆ ನೀಡಿದ್ದಾರೆ.

ನಾವು ರಾಜಕೀಯಕ್ಕೆ ಮೀಸಲಾತಿ ಕೇಳ್ತಾ ಇಲ್ಲ, ನನಗೆ ಅದರ ಅಗತ್ಯ ಇಲ್ಲ. ನಾನು ಹೇಗಾದರೂ ಗೆಲ್ತೇನೆ. ಆದರೆ ಬಡವರಿಗಾಗಿ ಮೀಸಲಾತಿ ಕೊಡಿ ಎಂದು ಹೇಳಿದರು.

ಇದೇ ವೇಳೆ ಒಕ್ಕಲಿಗರಿಗೂ ತಮಗೆ ಮೀಸಲಾತಿ ಹೆಚ್ಚಳ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿರುವ ವಿಚಾರವಾಗಿ ಮಾತನಾಡಿದ ಯತ್ನಾಳ್, ಆರ್. ಅಶೋಕ್ ಕೂಡ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ. ಆಮೇಲೆ ಮೀಸಲಾತಿ ಕೊಡೊಣ. ನಾವು ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತರು ಬಿಜೆಪಿಗೆ ಐವತ್ತು ಸ್ಥಾನ ಕೊಡ್ತಾ ಇದ್ದೇವೆ. ದೇವೆಗೌಡರ ತರ ಅಶೋಕ್ ಸೀಟು ಗೆದ್ದು ತರಲಿ ಎಂದು ಟಾಂಗ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...