alex Certify BIG NEWS: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಭಾರಿ ಗೋಲ್ ಮಾಲ್; ವಂಚನೆ ಬಯಲಿಗೆಳೆದ ಶಾಸಕ ಸುಬ್ಬಾರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಭಾರಿ ಗೋಲ್ ಮಾಲ್; ವಂಚನೆ ಬಯಲಿಗೆಳೆದ ಶಾಸಕ ಸುಬ್ಬಾರೆಡ್ಡಿ

ಚಿಕ್ಕಬಳ್ಳಾಪುರ: ಸಚಿವ ಉಮೇಶ್ ಕತ್ತಿಯವರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯಲ್ಲಿ ಭಾರಿ ಗೋಲ್ ಮಾಲ್ ನಡೆದಿದ್ದು, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧಿಕಾರಿಗಳ ಅಕ್ರಮ ಬಯಲಿಗೆಳೆದಿದ್ದಾರೆ.

60,000 ಮಂದಿಗೆ ಮಾತ್ರ ಹಜ್ ಯಾತ್ರೆಗೆ ಅವಕಾಶ

ಶಾಸಕ ಸುಬ್ಬಾರೆಡ್ಡಿ, ತಹಶೀಲ್ದಾರ್ ಹಾಗೂ ಅಧಿಕಾರಿಗಳ ತಂಡದೊಂದಿಗೆ ಬಾಗೇಪಲ್ಲಿ ಪಟ್ಟಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಗೋಡೌನ್ ಮೇಲೆ ದಾಳಿ ನಡೆಸಿ, ಅಕ್ರಮ ಬಯಲಿಗೆಳೆದಿದ್ದಾರೆ. ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ಎರಡು ಕ್ವಿಂಟಾಲ್ ರಾಗಿ ಕಡಿತ ಮಾಡಿ 3,500 ಕ್ವಿಂಟಾಲ್ ರಾಗಿ ಖರೀದಿ ಮಾಡದೇ ಮದ್ಯವರ್ತಿಗಳಿಗೆ ಹಣ ನೀಡಿದ್ದಾರೆ.

ಪಾಕಿಸ್ತಾನ ಸೂಪರ್ ಲೀಗ್: ಡೈವಿಂಗ್ ವೇಳೆ ಡಿಕ್ಕಿ, ಡು ಪ್ಲೆಸಿಸ್ ಆಸ್ಪತ್ರೆಗೆ ದಾಖಲು

100 ಕ್ವಿಂಟಲ್ ಅಕ್ಕಿ, 150 ಕ್ವಿಂಟಲ್ ಗೋಧಿಯನ್ನು ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸದೇ ಅಧಿಕಾರಿಗಳೇ ಕಾಳಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕರು ಆರೋಪಿಸಿದ್ದಾರೆ. ಬಾಗೇಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋಡೌನ್ ನ ಓರ್ವ ಸಿಬ್ಬಂದಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...