alex Certify BIG NEWS: ಇಂದು ಸಿಎಂ ಬೊಮ್ಮಾಯಿ ದೆಹಲಿಗೆ; ಕುತೂಹಲ ಮೂಡಿಸಿದ ಸಂಪುಟ ವಿಸ್ತರಣೆ ವಿಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಸಿಎಂ ಬೊಮ್ಮಾಯಿ ದೆಹಲಿಗೆ; ಕುತೂಹಲ ಮೂಡಿಸಿದ ಸಂಪುಟ ವಿಸ್ತರಣೆ ವಿಚಾರ

ಬೆಂಗಳೂರು: ಇಂದು ದೆಹಲಿಗೆ ತೆರಳುತ್ತಿರುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ದೆಹಲಿಗೆ ತೆರಳುತ್ತಿದೇನೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗುವ ಸಾಧ್ಯತೆ ಇದೆ. ನಡ್ಡಾ ಭೇಟಿಗೆ ಇನ್ನೂ ಸಮಯ ನೀಡಿಲ್ಲ, ಸಮಯ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಇನ್ನು ಗಡಿ ವಿವಾದ ವಿಚಾರವಾಗಿ ನ್ಯಾ.ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರ ಈ ಬಾರಿ ದೆಹಲಿ ಪ್ರವಾಸ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ವಿಧಾನಸಭಾ ಚುನಾವಣೆ, ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...