alex Certify BIG NEWS: ಇದು ಗೊತ್ತು ಗುರಿಯಿಲ್ಲದ ಟೊಳ್ಳು ಬಜೆಟ್; ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು ಎಂದ್ರು ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಗೊತ್ತು ಗುರಿಯಿಲ್ಲದ ಟೊಳ್ಳು ಬಜೆಟ್; ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು ಎಂದ್ರು ಸಿದ್ದರಾಮಯ್ಯ

ಬೆಂಗಳೂರು: ನೈತಿಕತೆ ಇಲ್ಲದ ಸರ್ಕಾರ ಮಂಡಿಸಿದ ಬಜೆಟ್ ಕೇಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕರು ಸಭಾತ್ಯಾಗ ಮಾಡಿದ್ದೆವು. ಬಜೆಟ್ ಮಂಡನೆ ಬಳಿಕ ಆಯವ್ಯಯ ಪುಸ್ತಕ ನೋಡಿದೆ. ಅದು ಗೊತ್ತುಗುರಿಯಿಲ್ಲದ ಟೊಳ್ಳು ಬಜೆಟ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ರಾಜ್ಯವನ್ನು 6 ವಲಯಗಳನ್ನಾಗಿ ಮಾಡಿದ್ದಾರೆ. ಹಿಂದೆ ಎಷ್ಟು ಖರ್ಚಾಗಿದೆ, ಮುಂದೆ ಎಷ್ಟು ಖರ್ಚಾಗುತ್ತೆ ಎಂಬ ಯಾವ ವಿಷಯದ ಬಗ್ಗೆಯೂ ಆಯವ್ಯಯದಲ್ಲಿ ಉಲ್ಲೇಖಿಸಿಲ್ಲ. ಬಿಚ್ಚಿಡುವುದಕ್ಕಿಂತ, ಬಚ್ಚಿಟ್ಟಿದ್ದೇ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಭರ್ಜರಿ ಗಿಫ್ಟ್

ಬಜೆಟ್ ನಲ್ಲಿ ಪಾರದರ್ಶಕತೆಯೇ ಇಲ್ಲ. ಸರ್ಕಾರ ವಿಧಾನಸಭೆ, ಜನರಿಗೆ ಉತ್ತರದಾಯಿಯಾಗಿರುತ್ತದೆ. ಕಳೆದ 5 ವರ್ಷಗಳಲ್ಲಿ ಆದಾಯ ಕೊರತೆಯಾಗಿಲ್ಲ. ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಸಾಲದ ಮೊತ್ತ ಹೆಚ್ಚಾಗಿದೆ. 19,485.84 ಕೋಟಿ ಕಂದಾಯ ಕೊರತೆಯಾಗಿದೆ. ಪ್ರಸಕ್ತ ವರ್ಷ ರಾಜ್ಯದ ಸಾಲದ ಮೊತ್ತ 3,97,680 ಕೋಟಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...