alex Certify BIG NEWS: ಇದು ಮಾಡು ಇಲ್ಲವೇ ಮಡಿ ಸ್ಥಿತಿ; ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಮಾಡು ಇಲ್ಲವೇ ಮಡಿ ಸ್ಥಿತಿ; ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗುತ್ತಿದ್ದು, ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರುವುದು ಉಸ್ತುವಾರಿ ಸಚಿವರ ಜವಾಬ್ದಾರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ಕೊರೊನಾ ತಡೆಯುವ ನಿಟ್ಟಿನಲ್ಲಿ ನಾವು ಮಾಡು ಇಲ್ಲವೇ ಮಡಿ ಎನ್ನುವ ಸ್ಥಿತಿಯಲ್ಲಿದ್ದೇವೆ. ಕಂಪ್ಲೀಟ್ ಲಾಕ್ ಡೌನ್ ಕೊನೇ ಅಸ್ತ್ರ. ನಾಳೆಯಿಂದ 14 ದಿನಗಳ ಕಾಲ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು ಎಂದು ಹೇಳಿದರು.

ಕೊರೊನಾ ಲಸಿಕೆ ಪಡೆಯುವವರಿಗೆ ಬಹುಮುಖ್ಯ ಮಾಹಿತಿ: ವ್ಯಾಕ್ಸಿನ್ ಸೆಂಟರ್ ಬಗ್ಗೆ ತಿಳಿಯಲು ಇಲ್ಲಿದೆ ಸುಲಭ ವಿಧಾನ

ಈ ಬಾರಿ ಎಡವಿದರೆ ಬೆಲೆ ತೆರಬೇಕಾಗುತ್ತದೆ. ಅನಗತ್ಯವಾಗಿ ಜನರು ಓಡಾಡಬಾರದು. ಲಾಕ್ ಡೌನ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಜಿಲ್ಲೆಗಳಲ್ಲಿ ಬಿಗಿ ಕ್ರಮ ಜಾರಿಗೆ ಬರುವಂತೆ ಮಾಡುವುದು ಸಚಿವರ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...