alex Certify BIG NEWS: ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿರುವಾಗ ಬಂದ್ ಮಾಡಿ ತೊಂದರೆ ಕೊಡುವುದು ಸರಿಯಲ್ಲ; ಪ್ರತಿಭಟನಾಕಾರರಿಗೆ ಸಿಎಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿರುವಾಗ ಬಂದ್ ಮಾಡಿ ತೊಂದರೆ ಕೊಡುವುದು ಸರಿಯಲ್ಲ; ಪ್ರತಿಭಟನಾಕಾರರಿಗೆ ಸಿಎಂ ಮನವಿ

ಹುಬ್ಬಳ್ಳಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆ ನಡೆಸುತ್ತಿರುವ ಭಾರತ್ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಂದ್ ಹೆಸರಲ್ಲಿ ಪ್ರತಿಭಟನೆ ನಡೆಸಿ ಜನರಿಗೆ ತೊಂದರೆ ಕೊಡುತ್ತಿರುವುದು ಸರಿಯಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಸಾಕಷ್ಟು ಜನರು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವಹಿವಾಟು ಆರಂಭವಾಗಿದೆ. ಹೀಗಾಗಿ ಬಂದ್ ನಡೆಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಪ್ರತಿಭಟನಾಕಾರರು ಬೇರೆ ವೈಜ್ಞಾನಿಕ ರೀತಿಯಲ್ಲಿ ಧರಣಿ ನಡೆಸಿ ತಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸಿ ಆದರೆ ಜನರಿಗೆ ತೊಂದರೆ ನೀಡಬಾರದು ಎಂದು ಮನವಿ ಮಾಡಿದರು.

ಇದೇ ವೇಳೆ ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ ನವರದ್ದು ಗುಲಾಮಗಿರಿ ಪಕ್ಷ. ಹಾಗಾಗಿ ಅವರಿಗೆ ದೇಶ ಭಕ್ತಿಯೂ ತಪ್ಪಾಗಿ ಕಾಣುತ್ತದೆ. ನಮ್ಮದು ದೇಶ ಭಕ್ತಿ ಪಕ್ಷ. ಸಿದ್ದರಾಮಯ್ಯ ಓರ್ವ ಮಾಜಿ ಸಿಎಂ ಹಾಗಾಗಿ ಹತಾಶರಾಗಿ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗಳಿಗೆ ಅಷ್ಟಾಗಿ ಉತ್ತರಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...