alex Certify BIG NEWS: ಉಕ್ರೇನ್ ನಲ್ಲಿ ರಾಜ್ಯದ 281 ವಿದ್ಯಾರ್ಥಿಗಳು; Ukraine.karnataka.techಗೆ ಮಾಹಿತಿ ನೀಡಿದರೆ ರಕ್ಷಣೆ; ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಕ್ರೇನ್ ನಲ್ಲಿ ರಾಜ್ಯದ 281 ವಿದ್ಯಾರ್ಥಿಗಳು; Ukraine.karnataka.techಗೆ ಮಾಹಿತಿ ನೀಡಿದರೆ ರಕ್ಷಣೆ; ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರ ಸಲಹೆ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ರಾಜ್ಯದ 281 ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂಬ ಮಾಹಿತಿ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಾಜನ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮನೋಜ್ ರಾಜನ್, ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರು Ukraine.karnataka.tech ಗೆ ಮಾಹಿತಿ ನೀಡಿದರೆ ರಕ್ಷಣೆ ಮಾಡುವ ವ್ಯವಸ್ಥೆ ಮಾಡಲಾಗುವುದು. ಈವರೆಗೆ 281 ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ತಿಳಿದುಬಂದಿದೆ ಎಂದು ತಿಳಿಸಿದರು.

ಉಕ್ರೇನ್ ನಲ್ಲಿರುವ ಕನ್ನಡಿಗರಿಗೆ ಯಾವುದೇ ರೀತಿ ಪ್ರಾಣಾಪಾಯವಾಗಿಲ್ಲ. ಯಾವುದೇ ಪ್ರಾಣಾಪಾಯದ ಬಗ್ಗೆ ಮಾಹಿತಿ ಬಂದಿಲ್ಲ. ತೊಂದರೆಗೆ ಸಿಲುಕಿರುವ ವಿದ್ಯಾರ್ಥಿಗಳನ್ನು ಶೀಘ್ರದಲ್ಲಿ ರಕ್ಷಣೆ ಮಾಡಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...