alex Certify BIG NEWS: ಉದ್ಯಮಿಯಿಂದ ಲಂಚ ಪಡೆದ ಪ್ರಕರಣ; ಎಎಸ್ಐ ಮನೆ ಮೇಲೆ ಎಸಿಬಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ಯಮಿಯಿಂದ ಲಂಚ ಪಡೆದ ಪ್ರಕರಣ; ಎಎಸ್ಐ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಉದ್ಯಮಿಯಿಂದ ಲಂಚ ಪಡೆದು ಸಿಕ್ಕಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ದಯಾನಂದ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಡಿಗೆಹಳ್ಳಿ ಎಎಸ್ಐ ದಯಾನಂದ ಉದ್ಯಮಿಯೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಬಗ್ಗೆ ಸಾಬೀತಾದ ಬೆನ್ನಲ್ಲೇ ನಿನ್ನೆಯಷ್ಟೇ ದಯಾನಂದ ಅವರನ್ನು ಅಮಾನತು ಮಾಡಿ ಎಸಿಬಿ ತನಿಖೆಗೆ ಆದೇಶ ನೀಡಲಾಗಿತ್ತು. ಇದರ ಬೆನ್ನಲ್ಲೇ ಈಗ ದಯಾನಂದ್ ಅವರ ಯಲಹಂಕ ಟೌನ್ ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ 10 ಅಧಿಕಾರಿಗಳು ಮನೆಯಲ್ಲಿ ಶೋಧ ನಡೆಸಿದ್ದಾರೆ.

ಎಎಸ್ಐ ದಯಾನಂದ 10 ಲಕ್ಷ ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದು, 5 ಲಕ್ಷ ರೂಪಾಯಿ ಮುಂಗಡವಾಗಿ ಹಣ ಪಡೆದಿದ್ದಾಗಿ ಸ್ವತಃ ಉದ್ಯಮಿಯೊಬ್ಬರು ಹಣ ಪಡೆಯುತ್ತಿದ್ದ ವಿಡಿಯೋ ಸಮೇತ ಪೊಲೀಸರಿಗೆ ದೂರು ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...