alex Certify BIG NEWS: ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಮುಂದುವರೆಸಿದ್ದಾರೆ.

ಬೆಳಗಾವಿಯಲ್ಲಿ ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸಾಂಗ್ಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಯೂನೂಸ್ ಖಾಜಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಉದ್ಯಮಿ ರವಿಕಿರಣ್ ಭಟ್ ಮಹಾರಾಷ್ಟ್ರ ಖಾಸಗಿ ಬ್ಯಾಂಕ್ ಮಾಜಿ ಉದ್ಯೋಗಿಯೊಬ್ಬರಿಗೆ 2 ಕೋಟಿ ಹಣ ಪಡೆದು ವಂಚನೆ ಎಸಗಿದ್ದಾಗಿ ಆರೋಪ ಕೇಳಿಬಂದಿತ್ತು. ಬಿಟ್ ಕಾಯಿನ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಹಿನ್ನೆಲೆಯಲ್ಲೇ ಕಿಡ್ನಾಪ್ ಮಾಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಇದೀಗ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...