alex Certify BIG NEWS: ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ; ಸಿ.ಪಿ.ಯೋಗೇಶ್ವರ್ ಮಾರ್ಮಿಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ; ಸಿ.ಪಿ.ಯೋಗೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ದೆಹಲಿ ಭೇಟಿ ವಿಚಾರ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ಎಕ್ಸಾಂ ಬರೆದಿದ್ದೇವೆ. ಆದರೆ ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯೋಗೇಶ್ವರ್, ದೆಹಲಿ ವರಿಷ್ಠರ ಬಳಿ ವೈಯಕ್ತಿಕವಾಗಿ ಒಂದಿಷ್ಟು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಂದಾಗಲೂ ಹಲವು ವಿಚಾರಗಳನ್ನು ಹೇಳಿದ್ದೇವೆ. ನಮ್ಮಲ್ಲಿ ಕೆಲ ಸಮಸ್ಯೆಗಳಿದ್ದವು ನಮ್ಮ ನೋವನ್ನು 4 ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿದ್ದೇವೆ. ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ. ಬಂದಾಗ ನೋಡೋಣ ಎಂದರು.

ಆನ್ಲೈನ್ ನಲ್ಲಿ ಆಹಾರ ಆರ್ಡರ್ ಮಾಡಿದ ಮಗಳು: ಬಿಲ್ ನೋಡಿ ದಂಗಾದ ತಂದೆ

ಇನ್ನು ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಯಾಗಬೇಕು. ಇದನ್ನು ನಾವು ಎಲ್ಲಿ ಹೇಳಬೇಕೋ ಅಲ್ಲಿ ಹೇಳಿದ್ದೇವೆ. ಮುಖ್ಯಮಂತ್ರಿಗಳ ಬಗ್ಗೆ ನನಗೆ ಗೌರವವಿದೆ ಅವರು ಇನ್ನೂ 2 ವರ್ಷ ಸಿಎಂ ಆಗಿ ಮುಂದುವರೆಯಲಿ ತಪ್ಪೇನು? ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...