alex Certify BIG NEWS: ಎದೆ ಝಲ್ ಎನಿಸುವ ರಕ್ಷಣಾ ಕಾರ್ಯಾಚರಣೆ; ಗೋದಾವರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎದೆ ಝಲ್ ಎನಿಸುವ ರಕ್ಷಣಾ ಕಾರ್ಯಾಚರಣೆ; ಗೋದಾವರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

ಹೈದರಾಬಾದ್: ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ತೆಲಂಗಾಣದ ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಮುಂದಿನ ಮೂರು ದಿನಗಳ ಕಾಲ ತೆಲಂಗಾಣದಲ್ಲಿ ಇನ್ನಷ್ಟು ಮಳೆಯಾಗಲಿದ್ದು ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆದಿಲಾಬಾದ್ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಗೋದಾವರಿ ನದಿ ಉಕ್ಕಿ ಹರಿಯುತ್ತಿದ್ದು, ಭೀಕರ ಪ್ರವಾಹವುಂಟಾಗಿದೆ. ಪ್ರವಾಹದ ರಭಸಕ್ಕೆ ಜೆಸಿಬಿ ಸಮೇತ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು ಸೇನಾ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ.

ಬೋರ್ಗರೆದು ಹರಿಯುತ್ತಿರುವ ಗೋದಾವರಿ ನದಿಯ ಪ್ರವಾಹದ ಹೊಡೆತಕ್ಕೆ ಸಿಲುಕಿ ಚೆನ್ನೂರು ಮಂಡಲ್ ಸಮೀಪದ ಸೋಮನಪಲ್ಲಿ ಗ್ರಾಮದಲ್ಲಿ ಜೆಸಿಬಿ ಮೇಲೆ ಹತ್ತಿ ರಕ್ಷಣೆಗಾಗಿ ಮೊರೆ ಇಟ್ಟಿದ್ದ ಇಬ್ಬರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿ ಏರ್ ಲಿಫ್ಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...