alex Certify BIG NEWS: ಏಕಾಏಕಿ ರಸ್ತೆಗೆ ಅಡ್ಡ ಬಂದ ಹಾವು; ದಿಢೀರ್ ಬ್ರೇಕ್ ಹಾಕಿದ ಲಾರಿ ಚಾಲಕ; ಭೀಕರ ಸರಣಿ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಕಾಏಕಿ ರಸ್ತೆಗೆ ಅಡ್ಡ ಬಂದ ಹಾವು; ದಿಢೀರ್ ಬ್ರೇಕ್ ಹಾಕಿದ ಲಾರಿ ಚಾಲಕ; ಭೀಕರ ಸರಣಿ ಅಪಘಾತ

ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಏಕಾಏಕಿ ಹಾವೊಂದು ರಸ್ತೆಗೆ ಅಡ್ಡಬಂದ ಪರಿಣಾಮ ಲಾರಿ ಚಾಲಕ ಸಡನ್ ಬ್ರೇಕ್ ಹಾಕಲು ಹೋಗಿ ಭೀಕರ ಸರಣಿ ಅಪಘಾತ ಸಂಭವಿಸಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿ ಬಳಿ ನಡೆದಿದೆ.

ಹಾವನ್ನು ತಪ್ಪಿಸಲು ಲಾರಿ ಚಾಲಕ ದಿಢೀರನೇ ಬ್ರೇಕ್ ಹಾಕುತ್ತಿದ್ದಂತೆ ಸರಣಿ ಅಪಘಾತ ಸಂಭವಿಸಿದೆ. ಲಾರಿ, ಟಾಟಾ ಏಸ್, ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕ ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದು ಹೊರಬರಲಾಗದೇ ಪರದಾಡುತ್ತಿದ್ದು, ಚಾಲಕನನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಇನ್ನೊಂದೆಡೆ ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದೆ. ವಾಹನ ಸವಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...