alex Certify BIG NEWS: ಐಎಎಸ್ ಅಧಿಕಾರಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿ ಕೋಟಿ ರೂ. ಪರಿಹಾರ ಕೇಳಿದ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐಎಎಸ್ ಅಧಿಕಾರಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿ ಕೋಟಿ ರೂ. ಪರಿಹಾರ ಕೇಳಿದ ಶಾಸಕ

ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಒಂದು ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ. ಈ ಕುರಿತಂತೆ ಶಾಸಕರ ಪರ ವಕೀಲ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸಾ.ರಾ. ಮಹೇಶ್ ಅವರ ಕುರಿತು ಬೇರೊಬ್ಬರೊಂದಿಗೆ ಫೋನ್ ನಲ್ಲಿ ಮಾತನಾಡುವ ವೇಳೆ ರೋಹಿಣಿ ಸಿಂಧೂರಿಯವರು, ಶಾಸಕರು ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂದಿದ್ದರಲ್ಲದೆ ಅವರು ಮಾಡಿರುವ ಅಕ್ರಮ ನೋಡಿದರೆ ಜೈಲಿನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದ್ದರು.

ಹೀಗಾಗಿ ರೋಹಿಣಿ ಸಿಂಧೂರಿ ಹಾಗೂ ಸಾ.ರಾ. ಮಹೇಶ್ ಅವರ ನಡುವೆ ಜಟಾಪಟಿ ನಡೆದಿತ್ತು. ಅಲ್ಲದೆ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸವನ್ನು ದುರ್ಬಳಕೆ ಮಾಡಿಕೊಂಡು ರೋಹಿಣಿ ಸಿಂಧೂರಿ ಈಜುಕೊಳ ನಿರ್ಮಿಸಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪ ಮಾಡಿದ್ದರು. ಇದೀಗ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...