alex Certify BIG NEWS: ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು; ತಹಶೀಲ್ದಾರ್ ಕೋರ್ಟ್ ನಿಂದ ಒತ್ತುವರಿ ತೆರವಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು; ತಹಶೀಲ್ದಾರ್ ಕೋರ್ಟ್ ನಿಂದ ಒತ್ತುವರಿ ತೆರವಿಗೆ ಆದೇಶ

ಬೆಂಗಳೂರು: ಒತ್ತುವರಿ ತೆರವಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದವರಿಗೆ ಬೆಂಗಳೂರಿನ ತಹಶೀಲ್ದಾರ್ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಬಾಗ್ಮನೆ ಟೆಕ್ ಪಾರ್ಕ್, ಪೂರ್ವ ಪಾರ್ಕ್ ರಿಡ್ಜ್ ಸೇರಿದಂತೆ ಹಲವರು ಒತ್ತುವರಿ ತೆರವಿಗೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿರುವ ಬೆಂಗಳೂರು ತಹಶೀಲ್ದಾರ್ ಕೋರ್ಟ್, ಒತ್ತುವರಿ ತೆರವಿಗೆ ಆದೇಶ ನೀಡಿದೆ. ಸರ್ವೆ ನಂ 35/1, 35/2, 35/3, 38/2 ಹಾಗೂ 85ರಲ್ಲಿ ತೆರವು ಮಾಡುವಂತೆ ಆದೇಶಿಸಿದೆ.

ಕಟ್ಟಡದ ಮಾಲೀಕರೇ ಸ್ವಂತ ಖರ್ಚಿನಲ್ಲಿ ಒತ್ತುವರಿ ತೆರವು ಮಾಡಬೇಕು. ಇಲ್ಲವಾದಲ್ಲಿ ಪಾಲಿಕೆಯ ಸರ್ವೇಯರ್ ನೆರವು ಪಡೆಯಬಹುದು. ಅದಕ್ಕೆ ತಗುಲುವ ವೆಚ್ಚವನ್ನು ಒತ್ತುವರಿದಾರರೇ ಭರಿಸಬೇಕು ಎಂದು ಸೂಚಿಸಿದೆ. ಅಲ್ಲದೇ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆಯೂ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...