alex Certify BIG NEWS: ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ; ‘ಸುಪ್ರೀಂ’ನಲ್ಲಿ ಗೆಲುವಿನ ವಿಶ್ವಾಸ; ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ; ‘ಸುಪ್ರೀಂ’ನಲ್ಲಿ ಗೆಲುವಿನ ವಿಶ್ವಾಸ; ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ನಮಗೆ ಗೆಲುವಾಗುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚುನಾವಣೆ ದೃಷ್ಟಿಯಿಂದ ಗಡಿ ವಿವಾದ ಎಬ್ಬಿಸಿಲ್ಲ. ವಿಪಕ್ಷ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಹುರುಳಿಲ್ಲ. ಬಹಳ ವರ್ಷಗಳಿಂದ ಮಹಾರಾಷ್ಟ್ರದವರು ಗಡಿ ವಿವಾದ ಮಾಡುತ್ತಿದ್ದಾರೆ. ಭಾಷೆ, ನೆಲ, ಜಲ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೂ ಸರ್ಕಾರ ಸಿದ್ಧವಿದೆ ಎಂದರು.

ಮಹಾರಾಷ್ಟ್ರವಾಗಿರಲಿ, ತೆಲಂಗಾಣವಾಗಿರಲಿ, ಆಂಧ್ರದಲ್ಲಿಯೇ ಇರಲಿ. ಎಲ್ಲಾ ಕನ್ನಡಿಗರ ರಕ್ಷಣೆ ಸರ್ಕಾರದ ಜವಾಬ್ದಾರಿ. ಜನರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...