alex Certify BIG NEWS: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ; ಅನ್ಯಾಯ ಸರಿಪಡಿಸುವಂತೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ; ಅನ್ಯಾಯ ಸರಿಪಡಿಸುವಂತೆ ಆಗ್ರಹ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಭುಗಿಲೆದ್ದಿದೆ. ಸಿಇಟಿ ಅಂಕದ ಜತೆ ಪಿಯುಸಿ ಅಂಕಗಳನ್ನು ಸೇರಿಸದೇ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ ಎದುರು ಸಿಐಟಿ ರಿಪೀಟರ್ಸ್ ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ನಮಗೂ ಕೂಡ ಸಿಇಟಿ ಹಾಗೂ ಪಿಯು ಅಂಕಗಳನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದಬಾರಿ ಕೋವಿಡ್ ನಿಂದಾಗಿ ಪಿಯು ಪರೀಕ್ಷೆ ರದ್ದಾಗಿತ್ತು. ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣಿಸಲಾಗಿತ್ತು. ಈ ವರ್ಷ ಸಿಇಟಿ ಜತೆ ಪಿಯು ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ರಿಪೀಟರ್ಸ್ ಆದ ನಮಗೂ ಸಿಇಟಿ ಹಾಗೂ ಪಿಯು ಅಂಕ ಪರಿಗಣಿಸುವಂತೆ ಕೆಇಎಗೆ ಒತ್ತಾಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...