alex Certify BIG NEWS: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜ್ಯೂ.NTR ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಜ್ಯೂ.NTR ಆಗಮನ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ಕರ್ನಾಟಕ ರಾಜ್ಯೋತ್ಸವ ದಿನದಂದು ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ.

ವಿಧಾನಸೌಧದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಗೌರವ ಸಲ್ಲಿಸಲಾಗುತ್ತಿದೆ. ಈ ಸಮಾರಂಭಕ್ಕೆ ತೆಲುಗು ಸೂಪರ್ ಸ್ಟಾರ್ ಜ್ಯೂ.ಎನ್ ಟಿ ಆರ್ ಆಗಮಿಸುತ್ತಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಜ್ಯೂ.ಎನ್ ಟಿ ಆರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಇದೀಗ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲು ಜ್ಯೂ. ಎನ್ ಟಿ ಆರ್ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ಸರ್ಕಾರ ಆಹ್ವಾನ ನೀಡಿದೆ. ಆದರೆ ಅವರ ಆಗಮನದ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ. ಇನ್ನು ಪುನೀತ್ ರಾಜ್ ಕುಮಾರ್ ಅವರಿಗೆ ನೀಡುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪು ಬದಲಾಗಿ ಅವರ ಪತ್ನಿ ಅಶ್ವಿನಿ ಸ್ವೀಕರಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...