alex Certify BIG NEWS: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ; ವಿವಾದ ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸುತ್ತೇವೆ; ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ; ವಿವಾದ ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸುತ್ತೇವೆ; ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರ ಎಚ್ಚರಿಕೆ

ವಿಜಯಪುರ: ಸಾವರ್ಕರ್ ಭಾವಚಿತ್ರ ವಿವಾದ ತಾರಕಕ್ಕೇರಿದ್ದು, ಈ ಮಧ್ಯೆ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಬಸವರಾಜ್ ಹೂಗಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಹೂಗಾರ, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನವರು ಸಾವರ್ಕರ್ ಫೋಟೋ ಸುಟ್ಟಿದ್ದರು. ಸಾವರ್ಕರ್ ಗೆ ಅವಮಾನ ಮಾಡಿದ್ದರು. ಬೇಕಂತಲೇ ವಿವಾದ ಸೃಷ್ಟಿಸಲು ಇಂತಹ ಕೃತ್ಯ ಪದೇ ಪದೇ ಮಾಡುತ್ತಿದ್ದಾರೆ. ಹಾಗಾಗಿ ವಿವಾದ ಅಂತ್ಯಗೊಳಿಸಲು ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದೇನೆ ಎಂದರು.

ಸಾವರ್ಕರ್ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್ ನವರು ಇಲ್ಲಿಗೆ ನಿಲ್ಲಿಸಲಿ. ಇಲ್ಲವಾದಲ್ಲಿ ನಾಳೆ ಕಾಂಗ್ರೆಸ್ ನಾಯಕರ ಮನೆಗಳಿಗೂ ಫೋಟೋ ಕಳಿಸುತ್ತೇವೆ. ಈ ಮೂಲಕ ಕಾಂಗ್ರೆಸ್ ನವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...