alex Certify BIG NEWS: ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಬೆಂಬಲಿಗರ ಸಭೆ ಕರೆದ YSV ದತ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಬೆಂಬಲಿಗರ ಸಭೆ ಕರೆದ YSV ದತ್ತ

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್‌.ವಿ. ದತ್ತ, ಕಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಆದರೆ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಕ್ಷೇತ್ರದಲ್ಲಿ ಆನಂದ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ವೈ.ಎಸ್.ವಿ. ದತ್ತ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

ಈ ಹಿನ್ನಲೆಯಲ್ಲಿ ಅಭಿಮಾನಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಕಣಕ್ಕಿಳಿಯುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿದ ವೈ.ಎಸ್.ವಿ. ದತ್ತ, ತಮಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ. ಆದರೆ ಕಡೆ ಪಕ್ಷ ಸೌಜನ್ಯಕ್ಕಾದರೂ ತಮ್ಮೊಂದಿಗೆ ಮಾತನಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಮಧ್ಯೆ ಬಹಿರಂಗ ಪತ್ರ ಬರೆದಿರುವ ವೈ.ಎಸ್.ವಿ. ದತ್ತ, ಕಾಂಗ್ರೆಸ್ ನಡೆಯಿಂದ ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಅಪಮಾನವಾಗಿದೆ. ಹಣ ಇಲ್ಲದ ತಮ್ಮನ್ನು ಕ್ಷೇತ್ರದ ಜನತೆ ದತ್ತಣ್ಣ ಎಂದು ಪ್ರೀತಿಯಿಂದ ಬೆಳೆಸಿದ್ದಾರೆ. ಹೀಗಾಗಿ ಭಾನುವಾರದಂದು ಕ್ಷೇತ್ರದ ಜನತೆಯ ಸಭೆ ನಡೆಸಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದು ಈಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...