alex Certify BIG NEWS: ಕಾಂಗ್ರೆಸ್ ನರಿ ಬುದ್ಧಿ ಬಗ್ಗೆ ಮತ್ತೊಮ್ಮೆ ಯೋಚಿಸಿ; ಅಲ್ಪಸಂಖ್ಯಾತರಿಗೆ ಹೇಳುತ್ತಲೇ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನರಿ ಬುದ್ಧಿ ಬಗ್ಗೆ ಮತ್ತೊಮ್ಮೆ ಯೋಚಿಸಿ; ಅಲ್ಪಸಂಖ್ಯಾತರಿಗೆ ಹೇಳುತ್ತಲೇ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ಮುಸ್ಲಿಂರು ಒಟ್ಟಾಗಬೇಕು ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಅಮಾನತುಗೊಳಿಸಿ ಉಗ್ರಪ್ಪ ಅವರಿಗೆ ಬರಿ ನೋಟೀಸ್ ನೀಡಿದೆ. ಪಕ್ಷದ ಈ ನರಿ ಬುದ್ಧಿ ಬಗ್ಗೆ ಇನ್ನೊಮ್ಮೆ ಯೋಚಿಸಿ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಸಿದ್ದರಾಮಯ್ಯ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ ಡಿಕೆ ಡಿಕೆ ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್ ನಲ್ಲಿ ಇದು ಸಾಮಾನ್ಯವಲ್ಲವೇ? ಎಂದು ವ್ಯಂಗ್ಯವಾಡಿದೆ.

ʼಸಂಗಾತಿʼ ಜೊತೆ ಸಂಬಂಧ ಗಟ್ಟಿಯಾಗಬೇಕೆಂದ್ರೆ ಹೀಗೆ ಮಾಡಿ

ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ ಇದನ್ನು ’ಬುರುಡೆ ರಾಮಯ್ಯ’ ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯನವರೇ, ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ, ಟಿಪ್ಪು ಜಯಂತಿ ನಡೆಸಿದಿರಿ, ಶಾದಿ ಭಾಗ್ಯ ಕೊಟ್ಟಿರಿ ಆದರೆ ಫಲವೇನು? ಅಲ್ಪಸಂಖ್ಯಾತ ಸಮಾವೇಶದಲ್ಲಿ ನಿಮ್ಮ ಜೊತೆಯೇ ಅಲ್ಪಸಂಖ್ಯಾತರಿರಲಿಲ್ಲ, ಡಿಕೆಶಿ ಪರ ನಿಂತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...