alex Certify BIG NEWS: ಕಾಂಗ್ರೆಸ್ ನಲ್ಲಿ ಎಂಥವರೆಲ್ಲ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ; ಇಂಥ ಸಂಸ್ಕೃತಿ ಆರಂಭವಾಗಿದ್ದೇ ಅವರಿಂದ; ಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ನಲ್ಲಿ ಎಂಥವರೆಲ್ಲ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ; ಇಂಥ ಸಂಸ್ಕೃತಿ ಆರಂಭವಾಗಿದ್ದೇ ಅವರಿಂದ; ಸಿಎಂ ತಿರುಗೇಟು

ಹುಬ್ಬಳ್ಳಿ: ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎಂದು ಆತನೇ ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟ್ವೀಟ್ ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಲ್ಲಿ ಎಂಥವರೆಲ್ಲ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇಂತ ಸಂಸ್ಕೃತಿ ಆರಂಭವಾಗಿದ್ದೇ ಕಾಂಗ್ರೆಸ್ ನಿಂದ. ಕಾಂಗ್ರೆಸ್ ನಾಯಕರು ರಾಜಕೀಯವಾಗಿ ದಿವಾಳಿಯಾಗಿದ್ದಾರೆ. ಸ್ಯಾಂಟ್ರೋ ರವಿ ಪ್ರಕರಣಗಳು ನಡೆದಿದ್ದು ಕಾಂಗ್ರೆಸ್ ಅವಧಿಯಲ್ಲಿಯೇ. ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಸ್ಯಾಂಟ್ರೋ ರವಿ ವಿಚಾರವಾಗಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ತಾನು ಬಿಜೆಪಿ ಕಾರ್ಯಕರ್ತ ಎಂದು ಸ್ಯಾಂಟ್ರೋ ರವಿಯೇ ಹೇಳಿಕೊಂಡಿದ್ದಾನೆ ಇಂತಹ ತಲೆಹಿಡುಕರು ಬಿಜೆಪಿಯಲ್ಲಿ ಮಾತ್ರ ಇರುವುದು. ಲಂಪಟರು, ನುಂಗುಬಾಕರು, ಲಂಚಮಂಚ ಪ್ರಹಸನದ ಶೂರರಿಂದ ಬಿಜೆಪಿ ತುಂಬಿ ತುಳುಕುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...