alex Certify BIG NEWS: ಕಾಂಗ್ರೆಸ್ ಪಕ್ಷ ಅನಾಥವಾಗಿದೆ; ನಾಯಕರು ಬೇಲ್ ಮೇಲೆ ಹೊರಗಿದ್ದಾರೆ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಪಕ್ಷ ಅನಾಥವಾಗಿದೆ; ನಾಯಕರು ಬೇಲ್ ಮೇಲೆ ಹೊರಗಿದ್ದಾರೆ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೇ ಅನಾಥವಾಗಿದೆ. ಪಕ್ಷದ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರೂ ಇಲ್ಲದಂತಾಗಿದೆ. ಅಲ್ಲಿ ಕಾರ್ಯಕರ್ತರು, ಪಕ್ಷದ ನಾಯಕರು ಅನಾಥರಾಗಿದ್ದಾರೆ. ಜನರು ಪಕ್ಷದ ಮೇಲೆ ಭರವಸೆಯನ್ನೇ ಕಳೆದುಕೊಂಡಿದ್ದಾರೆ ಎಂದರು.

ದೇಶ ಹಾಗೂ ರಾಜ್ಯದ ಜನತೆಗೆ ಭರವಸೆ ಎಂಬುದಿದ್ದರೆ ಅದು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮೇಲೆ ಮಾತ್ರ. ಕಾಂಗ್ರೆಸ್ ನಲ್ಲಿ ಭ್ರಷ್ಟಾಚಾರವೇ ಹಾಸುಹೊಕ್ಕಾಗಿದೆ. ರಾಜ್ಯ ಅಧ್ಯಕ್ಷರಿಂದ ಹಿಡಿದು ರಾಷ್ಟ್ರೀಯ ಅಧ್ಯಕ್ಷರವರೆಗೂ ಭ್ರಷ್ಟರೆ. ಎಲ್ಲರೂ ಬೇಲ್ ಮೇಲೆ ಹೊರಗಿದ್ದಾರೆ. ಇನ್ನು ಪಕ್ಷದ ಭವಿಷ್ಯವೇನಾಗಬಹುದು? ಈ ಬಗ್ಗೆ ನೀವೆ ಯೋಚಿಸಿ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಸಿಎಂ ಪರಮಾಧಿಕಾರ. ರಾಜ್ಯಕ್ಕೆ ಒಳಿತಾಗುವ ತೀರ್ಮಾನವನ್ನು ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ. ದೂರದೃಷ್ಟಿ ಇಟ್ಟುಕೊಂಡು ಸಮಯಕ್ಕೆ ತಕ್ಕ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...