alex Certify BIG NEWS: ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಕೊರಳಿಗೆ ಕೇಸರಿ ಶಾಲು ಹಾಕಿದ BJP ನಾಯಕರು; BSY ಆಶೀರ್ವಾದ ಪಡೆದ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಕೊರಳಿಗೆ ಕೇಸರಿ ಶಾಲು ಹಾಕಿದ BJP ನಾಯಕರು; BSY ಆಶೀರ್ವಾದ ಪಡೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಮತದಾನಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರಿಗೆ ಬಿಜೆಪಿ ನಾಯಕರು ಕೇಸರಿ ಶಾಲು ಹಾಕಿದ ಘಟನೆ ನಡೆದಿದೆ.

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಿ ಬರುತ್ತಿದ್ದ ಶಾಸಕ ಭೈರತಿ ಸುರೇಶ್ ಅವರನ್ನು ಬಿಜೆಪಿ ಶಾಸಕರಾದ ರಾಜುಗೌಡ, ಗೂಳಿಹಟ್ಟಿ ಶೇಖರ್, ಎಂ.ಪಿ. ರೇಣುಕಾಚಾರ್ಯ ಬಲವಂತವಾಗಿ ಎಳೆದು ಅವರ ಕೊರಳಿಗೆ ಕೇಸರಿ ಶಾಲು ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಎಷ್ಟೇ ಬೇಡ ಬೇಡ ಎಂದರೂ ಬಿಜೆಪಿ ಶಾಸಕರು ಒಂದರ ನಂತರ ಒಂದರಂತೆ ಎರಡು ಕೇಸರಿ ಶಾಲು ಹಾಕಿದ ಪ್ರಸಂಗ ನಡೆದಿದೆ.

ಈ ನಡುವೆ ಮತದಾನಕ್ಕಾಗಿ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಘಟನೆ ನಡೆದಿದೆ.

ವೋಟ್ ಮಾಡಿ ವಿಧಾನಸೌಧದಿಂದ ವಾಪಸ್ ಆಗುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮತದಾನ ಮಾಡಲು ತೆರಳುತ್ತಿದ್ದ ಪ್ರಿಯಾಂಕ್ ಖರ್ಗೆ ವಿಧಾನಸೌಧ ಪಡಸಾಲೆಯಲ್ಲಿ ಪರಸ್ಪರ ಎದುರಾಗಿದ್ದಾರೆ. ಈ ವೇಳೆ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿದ್ದು ಗಮನ ಸೆಳೆಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...