alex Certify BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ; ಸಚಿವರ ವಿರುದ್ಧವೇ ಶಾಸಕರ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ; ಸಚಿವರ ವಿರುದ್ಧವೇ ಶಾಸಕರ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳೊಳಗೇ ಸಚಿವರು, ಶಾಸಕರ ನಡುವೆ ಅಸಮಾಧಾನಗಳು ಭುಗಿಲೆದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಶಾಸಕರಾದ ಬಸವರಾಜ ರಾಯರೆಡ್ಡಿ, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರು 20ಕ್ಕೂ ಹೆಚ್ಚು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಸಚಿವರುಗಳು ದುರಹಂಕಾರ ಮಾಡುತ್ತಿದ್ದಾರೆ. ಅವರ್ಯಾರಿಗೂ ಕೆಲಸ ಮಾಡಿಕೊಡಲು ಆಸಕ್ತಿ ಇಲ್ಲ. ಶಾಸಕಾಂಗ ಸಭೆ ಕರೆಯುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ. ಸಚಿವರುಗಳ ದುರಹಂಕಾರಕ್ಕೆ ಬುದ್ಧಿ ಹೇಳಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಒಟ್ಟಾರೆ ಸಚಿವರ ವರ್ಗಾವಣೆ ಬಗ್ಗೆ ಸ್ವಪಕ್ಷದ ಕಾಂಗ್ರೆಸ್ ಶಾಸಕರೇ ಆರೋಪಿಸುತ್ತಿರುವುದು ಸರ್ಕಾರದ ವಿರುದ್ಧ ವಿಪಕ್ಷಗಳ ಹೋರಾಟಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...