alex Certify BIG NEWS: ಕಾಯಕವೇ ಕೈಲಾಸ ಎಂದು ನಂಬಿದವನು ನಾನು; ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಯಕವೇ ಕೈಲಾಸ ಎಂದು ನಂಬಿದವನು ನಾನು; ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ

ಬೆಂಗಳೂರು: ಕಾಯಕವೇ ಕೈಲಾಸ ಎಂದು ನಂಬಿದವನು ನಾನು ಬಳ್ಳಾರಿಯಲ್ಲಿ 5 ಸಾವಿರ ಜನರಿಗೆ ಉದ್ಯೋಗವನ್ನು ಕೊಟ್ಟಿದ್ದೇನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.

ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ತಿಳಿಸಲು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ಹಣಕಾಸು ಸಂಸ್ಥೆ ಮಾಡಿದ್ದೆ. 16 ವರ್ಷಗಳಲ್ಲಿ 5 ಸಾವಿರ ಜನರಿಗೆ ಉದ್ಯೋಗ ನೀಡಿದ್ದೇನೆ. ನಾನು ಇಂದು ಮನಸ್ಸಾಕ್ಷಿಯಿಂದ ಮಾತನಾಡುತ್ತಿದ್ದೇನೆ. ಕಾಯಕವೇ ಕೈಲಾಸ ಎಂಬ ತತ್ವದಲ್ಲಿ ನಂಬಿಕೆ ಇಟ್ಟಿವನು ಎಂದು ಬಸವಣ್ಣನವರ ವಚನದ ಸಾಲುಗಳನ್ನು ಉಲ್ಲೇಖಿಸಿದ್ದಾರೆ.

ನಾನು ಶ್ರೀರಾಮುಲು ಚಿಕ್ಕ ವಯಸ್ಸಿನಿಂದಲೂ ಸ್ನೇಹಿತರು. ರಾಮುಲು ಸೋದರ ಮಾವನಿಗೆ ರಾಜಕಾರಣದ ಆಸೆ ಇತ್ತು. ಆದರೆ ಅವರ ಹತ್ಯೆಯಾಯಿತು. 1999ರಲ್ಲಿ ರಾಮುಲು ಬಿಜೆಪಿಯಿಂದ ಸ್ಪರ್ಧೆ ಮಾಡಿದರು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...