alex Certify BIG NEWS: ಕಾರು ಚಾಲಕನ ಕೈ-ಕಾಲು ಕಟ್ಟಿ ನೇಣು ಬಿಗಿದ ದುಷ್ಕರ್ಮಿಗಳು; ಮಾಜಿ DCM ಸಹೋದರನ ಡ್ರೈವರ್ ಭೀಕರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು ಚಾಲಕನ ಕೈ-ಕಾಲು ಕಟ್ಟಿ ನೇಣು ಬಿಗಿದ ದುಷ್ಕರ್ಮಿಗಳು; ಮಾಜಿ DCM ಸಹೋದರನ ಡ್ರೈವರ್ ಭೀಕರ ಹತ್ಯೆ

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಕಾರು ಚಾಲಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಡೆದಿದೆ.

ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿ ಅವರ ಕಾರು ಚಾಲಕನಾಗಿದ್ದ 25 ವರ್ಷದ ಸಿದ್ಧಾರೂಢ ಶಿರಗುಪ್ಪ ಹತ್ಯೆಯಾದ ವ್ಯಕ್ತಿ. ದರೂರು ಗ್ರಾಮದ ಸಿದ್ಧಾರೂಢ ಶಿರಗುಪ್ಪನನ್ನು ಅಥಣಿ ಬಳಿ ಕೈ-ಕಾಲು ಕಟ್ಟಿ ನೇಣು ಬಿಗಿದು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೋದಿ ಭೇಟಿ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’ ತಂಡ; ಚಿತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ

ಕಳೆದ ರಾತ್ರಿ ಸಿದ್ಧಾರೂಢ, ಪರಪ್ಪ ಸವದಿ ಜತೆ ಉಗಾರ ಗ್ರಾಮಕ್ಕೆ ತೆರಳಿದ್ದ. ತಡ ರಾತ್ರಿ 11 ಗಂಟೆ ಸುಮಾರಿಗೆ ಅಥಣಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನ್ನು ಹಿಡಿದು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...