alex Certify BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ – ಸಚಿವ ಸುಧಾಕರ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ – ಸಚಿವ ಸುಧಾಕರ್ ಭೇಟಿ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡ ಮಟ್ಟದಲ್ಲಿ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಇಂದು ಸಚಿವ ಡಾ. ಕೆ. ಸುಧಾಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಕೆ.ಹೆಚ್. ಮುನಿಯಪ್ಪ, ಸಚಿವ ಸುಧಾಕರ್ ಅವರನ್ನು ಭೇಟಿಯಾಗಿ ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಸುಧಾಕರ್ ಭೇಟಿ ಬಳಿಕ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೂ ಉತ್ತರಿಸಲು ಮುನಿಯಪ್ಪ ನಿರಾಕರಿಸಿದ್ದು, ಸಚಿವ ಸುಧಾಕರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕನ ರಹಸ್ಯ ಸಭೆ ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಕೆ.ಹೆಚ್. ಮುನಿಯಪ್ಪ ತೀವ್ರ ಅಸಮಾಧಾನಗೊಂಡಿದ್ದು, ಕೆಲವು ಬಾರಿ ಬಹಿರಂಗವಾಗಿಯೂ ಹೇಳಿಕೆ ನೀಡಿದ್ದರು. ಇದೀಗ ಸಚಿವ ಸುಧಾಕರ್ ಅವರ ದಿಢೀರ್ ಭೇಟಿ ಅಚ್ಚರಿಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...